ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.
TSK
TSK · ಮಿಕ 7:9
مراجع Treasury of Scripture Knowledge في ಕನ್ನಡ IRV.
ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.
ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.
ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ?
ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು, ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.
ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!
ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!
ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.