ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.
TSK
TSK · ನಹೂಮ 1:2
مراجع Treasury of Scripture Knowledge في ಕನ್ನಡ IRV.
ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.
ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ?
‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;
ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.
ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.
ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.
ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.
‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ.
¶ ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.
¶ “ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.
ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಗೋಗನು ಇಸ್ರಾಯೇಲ್ ದೇಶದ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.
ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ,
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.