ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
TSK
TSK · ನಹೂಮ 2:8
مراجع Treasury of Scripture Knowledge في ಕನ್ನಡ IRV.
ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.
ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.
ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
¶ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.