ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.
TSK
TSK · ನೆಹೆಮಿಯ 10:39
مراجع Treasury of Scripture Knowledge في ಕನ್ನಡ IRV.
ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
¶ ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.
ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.
ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.