ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
TSK
TSK · ನೆಹೆಮಿಯ 13:22
مراجع Treasury of Scripture Knowledge في ಕನ್ನಡ IRV.
ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.
¶ ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,
ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.
ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
¶ ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.
ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.
ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.