ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.
TSK
TSK · ನೆಹೆಮಿಯ 2:20
مراجع Treasury of Scripture Knowledge في ಕನ್ನಡ IRV.
ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.
“ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.
ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ.
ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.