TSK

TSK · ನೆಹೆಮಿಯ 2:8

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.

ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.

ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.

ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.

¶ ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.

ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.

ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.

ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.