ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
TSK
TSK · ಅರಣ್ಯಕಾಂಡ 10:29
مراجع Treasury of Scripture Knowledge في ಕನ್ನಡ IRV.
¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.
¶ ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.
ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.
¶ ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.
ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.
ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.
¶ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.