TSK

TSK · ಅರಣ್ಯಕಾಂಡ 10:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

¶ ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.

ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.

ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.

ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.

ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.

ಆತನು ಅವರಿಗೆ, ಇಸ್ರಾಯೇಲ್‌ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.

ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.

ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.

ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!

¶ ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.

ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ!

‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.

ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?

ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ,