ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.
TSK
TSK · ಅರಣ್ಯಕಾಂಡ 11:1
مراجع Treasury of Scripture Knowledge في ಕನ್ನಡ IRV.
ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.
¶ ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.
ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
ಅವರು, “ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?” ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು.
¶ ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.
¶ ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.
ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.
ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
ಮನುಷ್ಯನಿಗೆ ಜೀವ ವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವುದೇಕೆ?
‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›
ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
¶ ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.