TSK

TSK · ಅರಣ್ಯಕಾಂಡ 11:15

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.

ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?

ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.

ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?

ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.

ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.