¶ ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.
TSK
TSK · ಅರಣ್ಯಕಾಂಡ 11:23
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.
ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.
“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.
¶ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.
ಯೇಸು ಅವರನ್ನು ದೃಷ್ಟಿಸಿ ನೋಡಿ ‹“ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ”› ಅಂದನು.
ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.