ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.
TSK
TSK · ಅರಣ್ಯಕಾಂಡ 11:25
مراجع Treasury of Scripture Knowledge في ಕನ್ನಡ IRV.
ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
¶ ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.
ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.
ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.
ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;
ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು.
ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ.
ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.