TSK

TSK · ಅರಣ್ಯಕಾಂಡ 12:10

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.

ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.

ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ.

ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.

ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!