TSK

TSK · ಅರಣ್ಯಕಾಂಡ 12:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”

ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.

¶ “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.

¶ ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.

¶ ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು.

ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.

ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,

ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,

“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.

¶ ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.

¶ ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.

ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.

ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.

“ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.

ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.

‹ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.›

¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›

ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.

ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.

¶ “ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.

ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”