TSK

TSK · ಅರಣ್ಯಕಾಂಡ 13:27

مراجع Treasury of Scripture Knowledge في ಕನ್ನಡ IRV.

العودة إلى المقطع

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.

ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.

ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.

ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.

ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.

ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.

ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.

ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.

ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.

ಆ ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.