TSK

TSK · ಅರಣ್ಯಕಾಂಡ 13:30

مراجع Treasury of Scripture Knowledge في ಕನ್ನಡ IRV.

العودة إلى المقطع

ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.

ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.

¶ ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.

ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು.

¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?