ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.
TSK
TSK · ಅರಣ್ಯಕಾಂಡ 14:19
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.
ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.
ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
¶ “‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.
ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.
¶ ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.