TSK

TSK · ಅರಣ್ಯಕಾಂಡ 14:2

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?

ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.

¶ ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.

¶ ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.

¶ ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು.

ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.

ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?

ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.

ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.

ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.

¶ ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.