ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.
TSK
TSK · ಅರಣ್ಯಕಾಂಡ 14:4
مراجع Treasury of Scripture Knowledge في ಕನ್ನಡ IRV.
ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.
ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.
‹ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.›
ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.