TSK

TSK · ಅರಣ್ಯಕಾಂಡ 14:5

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.

ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.

¶ ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.

ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ “ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ?

ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.

ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.

ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,