TSK

TSK · ಅರಣ್ಯಕಾಂಡ 15:25

مراجع Treasury of Scripture Knowledge في ಕನ್ನಡ IRV.

العودة إلى المقطع

ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಆಗ ಯೇಸು, ‹“ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು”› ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.

ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.

ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.