TSK

TSK · ಅರಣ್ಯಕಾಂಡ 15:31

مراجع Treasury of Scripture Knowledge في ಕನ್ನಡ IRV.

العودة إلى المقطع

ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”

ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,

ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.

ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು.

ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.

ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.

ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.