ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
TSK
TSK · ಅರಣ್ಯಕಾಂಡ 15:39
مراجع Treasury of Scripture Knowledge في ಕನ್ನಡ IRV.
¶ ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.
ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.
ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.
ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,
ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.
ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
“ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.