ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.
TSK
TSK · ಅರಣ್ಯಕಾಂಡ 16:15
مراجع Treasury of Scripture Knowledge في ಕನ್ನಡ IRV.
ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.
ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.
ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›
ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.