¶ ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.
TSK
TSK · ಅರಣ್ಯಕಾಂಡ 16:5
مراجع Treasury of Scripture Knowledge في ಕನ್ನಡ IRV.
ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.
ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.
ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.
ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.
ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.
ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
¶ “ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.
¶ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.