ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
TSK
TSK · ಅರಣ್ಯಕಾಂಡ 16:9
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು” ಎಂದನು.
ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
¶ ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.
¶ ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.
(ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?
ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.