ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.
TSK
TSK · ಅರಣ್ಯಕಾಂಡ 18:21
مراجع Treasury of Scripture Knowledge في ಕನ್ನಡ IRV.
¶ “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
“ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.
ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.
ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:
¶ ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.
ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
¶ ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.