ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.
TSK
TSK · ಅರಣ್ಯಕಾಂಡ 18:9
مراجع Treasury of Scripture Knowledge في ಕನ್ನಡ IRV.
¶ “‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
¶ “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
¶ ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
¶ “‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.
¶ ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.
ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.
¶ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.