ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.
TSK
TSK · ಅರಣ್ಯಕಾಂಡ 19:13
مراجع Treasury of Scripture Knowledge في ಕನ್ನಡ IRV.
¶ “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.
¶ “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.
‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.