ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.
TSK
TSK · ಅರಣ್ಯಕಾಂಡ 20:28
مراجع Treasury of Scripture Knowledge في ಕನ್ನಡ IRV.
¶ ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.
“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
¶ ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;
¶ ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.
ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.
¶ ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.
ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.