ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು.
TSK
TSK · ಅರಣ್ಯಕಾಂಡ 20:4
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.
ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
ಐಗುಪ್ತದಲ್ಲಿ ಮಹತ್ತುಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ,
¶ “ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.