ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.
TSK
TSK · ಅರಣ್ಯಕಾಂಡ 21:34
مراجع Treasury of Scripture Knowledge في ಕನ್ನಡ IRV.
ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು.
¶ ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.
ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.
“ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.
ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು.
ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
¶ ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.
¶ “ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.