TSK

TSK · ಅರಣ್ಯಕಾಂಡ 21:7

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.

¶ ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.

ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.

ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.

¶ ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.

ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,

ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.

¶ ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.

ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.

¶ ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.

ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.

¶ ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.

“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.

¶ ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.