TSK

TSK · ಅರಣ್ಯಕಾಂಡ 22:7

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’

ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು

ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.

ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.