¶ ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
TSK
TSK · ಅರಣ್ಯಕಾಂಡ 22:8
مراجع Treasury of Scripture Knowledge في ಕನ್ನಡ IRV.
ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು.
ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’
ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.