TSK

TSK · ಅರಣ್ಯಕಾಂಡ 24:19

مراجع Treasury of Scripture Knowledge في ಕನ್ನಡ IRV.

العودة إلى المقطع

ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.

‹ಮತ್ತು ಅನೀತಿವಂತರಾದ ಇವರು›‹ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.›

ಅದೇನೆಂದರೆ, ‹“ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.›

ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.

ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.