ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.
TSK
TSK · ಅರಣ್ಯಕಾಂಡ 26:65
مراجع Treasury of Scripture Knowledge في ಕನ್ನಡ IRV.
ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.
ನೀವಂತೂ ಈ ಅರಣ್ಯದಲ್ಲಿ ಸಾಯುವಿರಿ.
ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
ನಾವು ಕಾದೇಶ್ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.
ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.
ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.