TSK

TSK · ಅರಣ್ಯಕಾಂಡ 27:16

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.

ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,

ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.

¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

‹ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ”› ಎಂದು ಹೇಳಿದನು.

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.