TSK

TSK · ಅರಣ್ಯಕಾಂಡ 28:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.

ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.

ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.

ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.

ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.

ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.

ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.

¶ ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.