¶ ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.
TSK
TSK · ಅರಣ್ಯಕಾಂಡ 28:6
مراجع Treasury of Scripture Knowledge في ಕನ್ನಡ IRV.
“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.
ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.