TSK

TSK · ಅರಣ್ಯಕಾಂಡ 28:7

مراجع Treasury of Scripture Knowledge في ಕನ್ನಡ IRV.

العودة إلى المقطع

ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.

ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.

ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.

ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.

ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.

ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?

¶ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.

ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.