TSK

TSK · ಅರಣ್ಯಕಾಂಡ 28:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.

ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,

ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.