¶ “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
TSK
TSK · ಅರಣ್ಯಕಾಂಡ 31:28
مراجع Treasury of Scripture Knowledge في ಕನ್ನಡ IRV.
ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.
ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.
ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.
¶ ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.
ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.