TSK

TSK · ಅರಣ್ಯಕಾಂಡ 31:8

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.

ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.

ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.

ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.

ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ

ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.

ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.

ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.