¶ ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
TSK
TSK · ಅರಣ್ಯಕಾಂಡ 32:19
مراجع Treasury of Scripture Knowledge في ಕನ್ನಡ IRV.
ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು.
ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
¶ ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
¶ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.
ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.