TSK

TSK · ಅರಣ್ಯಕಾಂಡ 4:20

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.

ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.

ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.

¶ ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.