TSK

TSK · ಅರಣ್ಯಕಾಂಡ 6:15

مراجع Treasury of Scripture Knowledge في ಕನ್ನಡ IRV.

العودة إلى المقطع

ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,

ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.

ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’” ಅಂದನು.

ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.

ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.

ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.

ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.