ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.
TSK
TSK · ಅರಣ್ಯಕಾಂಡ 6:2
مراجع Treasury of Scripture Knowledge في ಕನ್ನಡ IRV.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.
¶ “ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ
ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಲು ಪ್ರಾರಂಭಿಸುವನು” ಅಂದನು.
ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.
ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.
ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.