“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
TSK
TSK · ಅರಣ್ಯಕಾಂಡ 7:15
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
‹ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.›
¶ ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.